Breaking News

ಕರ್ನಾಟಕದ ವೀರ ಯೋಧ ಮೇಜರ್ ಅಕ್ಷಯ್ ಗಿರೀಶ್ ಕುಮಾರ್ ಉಗ್ರರೊಂದಿಗೆ ಕಾದಾಡಿ ಹುತಾತ್ಮ


ಜಮ್ಮು-ಕಾಶ್ಮೀರದ ನಗ್ರೋಟಾ ಉಗ್ರದಾಳಿಯಲ್ಲಿ  ನಿನ್ನೆ ಹುತಾತ್ಮರಾದ 7 ಯೋಧರ ಪೈಕಿ ಬೆಂಗಳೂರಿನ  ಮೇಜರ್​ ಅಕ್ಷಯ್​ ಗಿರೀಶ್​ ಕುಮಾರ್ ಸಹ ಒಬ್ಬರು. 31 ವರ್ಷದ ಮೇಜರ್​ ಅಕ್ಷಯ್​ ಗಿರೀಶ್​ ಕುಮಾರ್​   ಬೆಂಗಳೂರಿನ ಯಲಹಂಕದ  ಗೇಟ್ ಗಾರ್ಡನ್ ನಿವಾಸಿಯಾಗಿದ್ದಾರೆ 
ದೇಶ ಸೇವೆಗಾಗಿ  ವಿದ್ಯಾಭ್ಯಾಸವನ್ನು ಅರ್ಧಕ್ಕೆ ಬಿಟ್ಟು ಹೋಗಿದ್ದರು ಅವರು. ಹೆತ್ತವರು, ಹೆಂಡತಿ , ಮಗಳು ಇವರೆಲ್ಲರನ್ನು ಬಿಟ್ಟು  ಕಾಶ್ಮೀರದಲ್ಲಿ  ಕಾವಲಿಗೆ ನಿಂತಿದ್ದರು. ಇಂಥಾ ಮಹಾನ್​ ಯೋಧ ಇಂದು ನಮ್ಮೊಂದಿಗಿಲ್ಲ. ನಿನ್ನೆ  ಕಾಶ್ಮೀರದಲ್ಲಿ  ಉಗ್ರರೊಂದಿಗೆ ಕಾದಾಡಿ ಹುತಾತ್ಮರಾಗಿದ್ದಾರೆ 

No comments