Breaking News

ಭಾರತ್ ಬಂದ್ ಗೆ ನಮ್ಮ ಬೆಂಬಲವಿಲ್ಲ - ಸಿ ಎಂ ಸಿದ್ದರಾಮಯ್ಯ.

ಧಾರವಾಡ: ನ.28ರಂದು ನಡೆಯಲಿರುವ ಭಾರತ್ ಬಂದ್ ಗೆ ನಮ್ಮ ಬೆಂಬಲ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.ಅಂದಿನ ವಿಧಾನಮಂಡಲದ ಕಲಾಪಕ್ಕೆ ರಜೆ ನೀಡುತ್ತಿರುವುದು ಸ್ಪೀಕರ್ ನಿರ್ಧಾರ, ಅದು ಸರ್ಕಾರದ ನಿರ್ಧಾರವಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಸಂದರ್ಭದಲ್ಲಿ ಹೇಳಿದರು.
500 ಹಾಗೂ 1000 ಮುಖಬೆಲೆಯ ನೋಟು ನಿಷೇಧಕ್ಕೆ ವಿರೋಧ ವ್ಯಕ್ತಪಡಿಸಿರುವ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್,  ಕಾಂಗ್ರೆಸ್ ಹಾಗೂ ಎಡ ಪಕ್ಷಗಳು ಸೇರಿ ಬಂದ್ ಗೆ ಕರೆನೀಡಿದೆ.
 ಇದರ ಮದ್ಯೆ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನ ಕಲಾಪವನ್ನು ಸ್ಪೀಕರ್ ಮಂಗಳವಾರಕ್ಕೆ ಮುಂದೂಡಿರುವ ಬಗ್ಗೆ ಬಿಜೆಪಿ ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿ, ಸೋಮವಾರದ ಭಾರತ್ ಬಂದ್ ಗೆ ರಾಜ್ಯ ಸರ್ಕಾರ ಪರೋಕ್ಷವಾಗಿ ಬೆಂಬಲ ವ್ಯಕ್ತಪಡಿಸುತ್ತಿದೆ ಎಂದು ಆರೋಪಿಸಿದೆ.
ಇದರ ಸಲುವಾಗಿ ಧಾರವಾಡದ ಜಿಲ್ಲಾ ಪಂಚಾಯ್ತಿ ಸಭಾಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಿಎಂ, 500, 1000 ರೂಪಾಯಿ ನೋಟು ನಿಷೇಧಿಸಿದ್ದಕ್ಕೆ ನಮ್ಮ ವಿರೋಧ ಇಲ್ಲ. ಆದರೆ ಸರಿಯಾದ ಪೂರ್ವ ತಯಾರಿ ಇಲ್ಲದೆ ನಿಷೇಧಿಸಿದ್ದರಿಂದ ಜನಸಾಮಾನ್ಯರಿಗೆ ತೊಂದರೆಯಾಗಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವುದಾಗಿ ತಿಳಿಸಿದರು.
ಆದರೆ ಕಲಾಪಕ್ಕೆ ಸೋಮವಾರ ರಜೆ ನೀಡುವ ಸ್ಪೀಕರ್ ನಿರ್ಧಾರವನ್ನು ಬಿಜೆಪಿ ಮಾತ್ರ ವಿರೋಧಿಸುತ್ತಿದೆ ಎಂದು ಹೇಳಿದರು.

No comments