Breaking News

ಶಿರ್ವ ಚರ್ಚ್ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳು



ಉಡುಪಿ : ಶಿರ್ವ ಚರ್ಚ್ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ಪ್ರತಿಮೆಗಳನ್ನು ದ್ವಂಸ ಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಸರಿ ಸುಮಾರು ಮಧ್ಯಾಹ್ನ 1ರಿಂದ 3.30 ಗಂಟೆಗೆ ನಡೆದಿದೆ ಎಂದು ಅಂದಾಜಿಸಲಾಗಿದೆ. ದುಷ್ಕರ್ಮಿಗಳು ಸೇಂಟ್ ಆಂಟನಿ ಪ್ರತಿಮೆ ಸಂಪೂರ್ಣವಾಗಿ ಚೂರುಚೂರಾಗಿ ಮಾಡಿ  ಸೇಂಟ್ ಲಾರೆನ್ಸ್ ಪ್ರತಿಮೆ ಸ್ಥಳಾಂತರಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ .ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿ ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ

No comments