Breaking News

ವೀಡಿಯೋ - ಯಡಿಯೂರಪ್ಪ ದಿಡ್ಡಳ್ಳಿ ಭೇಟಿ ಸಂದರ್ಭ ಬಿಜೆಪಿ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು.

ಮಡಿಕೇರಿ : ಮಡಿಕೇರಿಯ ದಿಡ್ಡಳ್ಳಿಯಲ್ಲಿ ನಿರಾಶ್ರಿತ ಗಿರಿಜನರು ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಭೇಟಿ ನೀಡಿದ ಸಂದರ್ಭದಲ್ಲಿ ಪ್ರತಿಭಟನಾಕಾರರು ಬಿಜೆಪಿ ವಿರುದ್ಧ ಧಿಕ್ಕಾರ ಕೂಗಿದ ಘಟನೆ ನಡೆದಿದೆ.

ಇದೇ ಸಂಧರ್ಭದಲ್ಲಿ ಯಡಿಯೂರಪ್ಪ ಜೊತೆಗಿದ್ದ ಬಿಜೆಪಿ ನಾಯಕರು ಮತ್ತು ಪ್ರತಿಭಟನಾಕಾರರ ಮಧ್ಯೆ ವಾಗ್ವಾದ ನಡೆಯಿತು ಕೊನೆಗೆ ಯಡಿಯೂರಪ್ಪ ತಮ್ಮ ಜೊತೆಗಿದ್ದವರನ್ನು ವಾಗ್ವಾದ ನಡೆಸದಂತೆ ಸುಮ್ಮನಾಗಿಸಿದರು. ಈ ಕುರಿತ ವೀಡಿಯೋ ಸಾಮಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಡಿಸೆಂಬರ್ 7ರಂದು ವಿರಾಜಪೇಟೆಯ ದಿಡ್ಡಳ್ಲಿಯ ಅರಣ್ಯದಲ್ಲಿ ಗುಡಿಸಲು ಕಟ್ಟಿ ವಾಸಿಸುತ್ತಿದ್ದ 577 ಆದಿವಾಸಿ ಕುಟುಂಬಗಳನ್ನು ಜಿಲ್ಲಾಡಳಿತ ಹೊರದಬ್ಬಿತ್ತು. ಆದಿವಾಸಿಗಳು ವಾಸವಿದ್ದ ಪ್ರದೇಶ ಮೀಸಲು ಅರಣ್ಯ ಪ್ರದೇಶವೆಂದು ಗುಡಿಸಲುಗಳನ್ನು ಧ್ವಂಸ ಮಾಡಿ ವೃದ್ದರು, ಹೆಂಗಸರು, ಮಕ್ಕಳು, ಹಸುಗೂಸುಗಳೆಂದೂ ನೋಡದೆ ಹೊರಹಾಕಿ ದರ್ಪ ತೋರಿದ್ದರು.

ಇದನ್ನು ವಿರೋಧಿಸಿ ಗಿರಿಜನ ಮಹಿಳೆಯರು ಬೆತ್ತಲೆ ಪ್ರತಿಭಟನೆ ಮಾಡಿದರು ಸರ್ಕಾರ ತಲೆಕೆಡಿಸಿಕೊಂಡಿರಲಿಲ್ಲ.

ಸ್ಥಳಕ್ಕೆ ಭೇಟಿ ನೀಡಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹ  ಪ್ರತಿಭಟನಾಕಾರರ ಮನವೊಲಿಸುವ ಬದಲು ಉಡಾಫೆಯ ಮಾತುಗಳನ್ನಾಡಿದ್ದರು, ಇದು ಪ್ರತಿಭಟನಾಕಾರರನ್ನು ಕೆರಳಿಸಿತ್ತು.

ಆದರೆ ಗಿರಿಜನರ ಹೋರಾಟಕ್ಕೆ ರಾಜ್ಯದೆಲ್ಲೆಡೆಯಿಂದ ಜನರ ಬೆಂಬಲ ಸಿಕ್ಕಿ ಹೋರಾಟ ತೀವ್ರಗೊಳ್ಳುತ್ತಿದ್ದಂತೆ ರಾಜ್ಯ ಸರ್ಕಾರ ಪ್ರತಿಭಟನಾಕಾರರನ್ನು ಮನವೊಲಿಸುವ ಪ್ರಯತ್ನಕ್ಕೆ ಕೈಹಾಕಿತ್ತು. ದಿಡ್ಡಳ್ಳಿಯಿಂದ ಒಕ್ಕಲೆಬ್ಬಿಸಿರುವ 577 ಕುಟುಂಬಗಳಿಗೆ ಅಲ್ಲೇ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಕೊಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸೀತಾರಾಂ ಭರವಸೆ ನೀಡಿದ್ದರು.


No comments