Breaking News

ಜ 28ಕ್ಕೆ ಮೂಡುಬಿದಿರೆಯಲ್ಲಿ ಕಂಬಳ ಮಾಡಿಯೇ ಸಿದ್ದ ನಿರ್ಣಯ ?


ಮೂಡುಬಿದಿರೆ : ತುಳುನಾಡಿನ ಸಾಂಪ್ರದಾಯಿಕ ಕ್ರೀಡೆ ಕಂಬಳ ನಡೆಯುವ ಬಗ್ಗೆ ಹೈಕೋರ್ಟ್ ತೀರ್ಪಿಗೆ ಕಾಯುತ್ತಿರುವ ನಡುವೆಯೇ ಜ 28ರಂದು ತೀರ್ಪು ಪರವಾಗಿ ಬಂದರೆ ವಿಜಯೋತ್ಸವ ಇಲ್ಲವಾದರೆ ಕಂಬಳ ನಡೆಸುವ ಮೂಲಕವೇ ಪ್ರತಿಭಟಿಸಲು ನಿರ್ಧರಿಸಲಾಗಿದೆ. ಕಾಸರಗೋಡು ಸೇರಿದಂತೆ ಅವಿಭಜಿತ ದ ಕ ಜಿಲ್ಲಾ ಕಂಬಳ ಸಮಿತಿಯ ವತಿಯಿಂದ ಕಂಬಳದ ಕೋಣಗಳ ಮಾಲಕರು, ಓಟಗಾರರು, ಹಿತೈಶಿಗಳ ಸಮಾಲೋಚನಾ ತುರ್ತು ಸಭೆ ಎಂ ಸಿ ಎಸ್.ಬ್ಯಾಂಕಿನ ಕಲ್ಪವೃಕ್ಷ ಸಭಾಂಗಣದಲ್ಲಿ ರವಿವಾರ ಸಂಜೆ ನಡೆದಿದ್ದು, ಈ ನಿರ್ಧಾರ ಕೈಗೊಳ್ಳಲಾಗಿದೆ.

ಹೈಕೋರ್ಟ್ ತೀರ್ಪು ಕಂಬಳದ ಪರವಾಗಿ ಬರಬಹುದು ಎಂಬ ವಿಶ್ವಾಸವಿದೆ. ಜ 28ರಂದು ಬೆಳಿಗ್ಗೆ 9ಕ್ಕೆ ಕರಾವಳಿಯ ಎಲ್ಲ ಕಂಬಳದವರು ಮೂಡುಬಿದಿರೆ ಸ್ವರಾಜ್ಯ ಮೈದಾನದಲ್ಲಿ ಕೋಣಗಳೊಂದಿಗೆ ಸೇರಲಿದ್ದಾರೆ. ಅಲ್ಲಿಂದ ಮೆರವಣಿಗೆಯಲ್ಲಿ ಕಡಲಕೆರೆ ನಿಸರ್ಗಧಾಮದ ಕಂಬಳದ ಕರೆಗೆ ತೆರಳಿ ಅಲ್ಲಿ ಪ್ರತಿಭಟನೆ ಇಲ್ಲವೇ ವಿಜಯೋತ್ಸವ ಆಚರಿಸಲು ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯಿಸಲಾಗಿದೆ. ಈ ನಡುವೆ ಬಗ್ಗೆ ಜಾನಪದ ಕ್ರೀಡೆ ಕಂಬಳದ ಉಳಿವಿಗಾಗಿ ಜನರಲ್ಲಿ ಜಾಗೃತಿ ಪ್ರಜ್ಞೆ ಮೂಡಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಡಲಾಯಿತು.
-karavli ale

loading...

No comments