Breaking News

ಎಂಎಲ್'ಸಿಗಳ ತುರ್ತು ಸಭೆ ,ವಿಪಕ್ಷ ಸ್ಥಾನದಿಂದ ಈಶ್ವರಪ್ಪ ಗೇಟ್ ಪಾಸ್ ನೀಡುವ ಸಾಧ್ಯತೆ


ಬೆಂಗಳೂರು :  ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ  ಮತ್ತು ವಿಧಾನ ಸಭಾ ಪ್ರತಿಪಕ್ಷ ನಾಯಕ ಕೆಎಸ್ ಈಶ್ವರಪ್ಪ ನಡುವೆ ಇರುವ ಭಿನ್ನಮತ ನಿರ್ಣಾಯಕ ಹಂತಕ್ಕೆ ತಲುಪಿದೆ , ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ರಾಜ್ಯ ಪ್ರಧಾನ ಕಾರ್ಯದರ್ಶಿ ಈಶ್ವರಪ್ಪ  ಬಿಬಿಎಂಪಿ ಮಾಜಿ ಮೇಯರ್ ಟಿ.ವೆಂಕಟೇಶ್‍ಮೂರ್ತಿ ಅವರನ್ನು ಪಕ್ಷವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಅಮಾನತು ಗೊಳಿಸಿ ಈಶ್ವರಪ್ಪನವರಿಗೆ ಟಾಂಗ್ ನೀಡಿದ ಯಡಿಯೂರಪ್ಪ  ಇದೀಗ ಈಶ್ವರಪ್ಪನವರನ್ನು ವಿಪಕ್ಷ ಸ್ಥಾನದಿಂದ ಗೇಟ್ ಪಾಸ್ ನೀಡಲು ತಂತ್ರ ರೂಪಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ 

ಇದಕ್ಕೆ ಪೂರಕವೆಂಬಂತೆ ದಿಡೀರ್ ಆಗಿ ಬಿಜೆಪಿ ಎಂಎಲ್'ಸಿಗಳ ತುರ್ತು ಸಭೆಯನ್ನು ಇಂದು ಸಂಜೆ ಕರೆಯಲಾಗಿದೆ ಈ ಸಭೆಗೆ  ಕೆಎಸ್ ಈಶ್ವರಪ್ಪನವರಿಗೆ ಆಹ್ವಾನವನ್ನೇ ನೀಡಲಾಗಿಲ್ಲ.ಇಂದು ಸಂಜೆ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆಯಲಿರುವ ಈ ಸಭೆಯಲ್ಲಿ ಈಶ್ವರಪ್ಪನವರನ್ನು ವಿಪಕ್ಷ ಸ್ಥಾನದಿಂದ ಕೆಳಗಿಳಿಸುವ ಕುರಿತು ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಬಿಜೆಪಿ ಮೂಲಗಳು ಹೇಳುತ್ತಿವೆ.

No comments