Breaking News

ಸಾಕ್ಷಿ ಮಹಾರಾಜ್‍ಗೆ ಚುನಾವಣಾ ಆಯೋಗದ ನೋಟಿಸ್



ನವದೆಹಲಿ  : ದೇಶದಲ್ಲಿ ಜನಸಂಖ್ಯೆ ಏರಿಕೆಯಾಗಲು ನಾಲ್ಕು ಪತ್ನಿಯರು, 40 ಮಕ್ಖಳು ಬೇಕು ಎನ್ನುವವರೇ ಕಾರಣ ಎಂದು ಮುಸ್ಲಿಮರ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದ ಸಾಕ್ಷಿ ಮಹಾರಾಜ್ಗೆ ಚುನಾವಣಾ ಆಯೋಗ ನಿನ್ನೆ ರಾತ್ರಿ ಶೋಕಾಸ್ ನೋಟಿಸ್ ಜಾರಿಗೊಳಿಸಿದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ಹೀಗಾಗಿ ನಿಮ್ಮ ವಿರುದ್ಧ ಏಕೆ ಕ್ರಮ ಕೈಗೊಳ್ಳಬಾರದು ಎಂದು ನೋಟಿಸ್‍ನಲ್ಲಿ ಪ್ರಶ್ನಿಸಲಾಗಿದೆ. ಈ ಸಂಬಂಧ ಪ್ರತ್ಯುತ್ತರ ನೀಡುವಂತೆ ನಾಳೆ ಬೆಳಗ್ಗೆವರೆಗೆ ಅವರಿಗೆ ಕಾಲಾವಕಾಶ ನೀಡಲಾಗಿದೆ.  ಉತ್ತರಪ್ರದೇಶ ಸೇರಿದಂತೆ ಐದು ರಾಜ್ಯಗಳ ವಿಧಾನಸಭೆಗಳಿಗೆ ಚುನಾವಣೆ ದಿನಾಂಕ ಘೋಷಿಸಿದ ಜ.4ರಿಂದ ನೀತಿ ಸಂಹಿತೆ ಜಾರಿಯಲ್ಲಿದೆ. 

No comments