ಈಶ್ವರಪ್ಪ ಆಪ್ತ ವೆಂಕಟೇಶ್ಮೂರ್ತಿ ಬಿಜೆಪಿಯಿಂದ ಉಚ್ಚಾಟನೆ
ಬೆಂಗಳೂರು :ಕರ್ನಾಟಕ ಬಿಜೆಪಿಯಲ್ಲಿ ಸದ್ದು ಮಾಡಿದ ಸಂಗೊಳ್ಳಿರಾಯಣ್ಣ ಬ್ರಿಗೇಡ್ ಬಿಜೆಪಿ ರಾಜ್ಯಾಧ್ಯಕ್ಷ ಯಡ್ಡಿರೋಪ್ಪನವರ ಕೆಂಗಣ್ಣಿಗೆ ಗುರಿಯಾಗಿತ್ತು . ಇದೀಗ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ರಾಜ್ಯ ಪ್ರಧಾನ ಕಾರ್ಯದರ್ಶಿ ಈಶ್ವರಪ್ಪ ಅವರ ಪರಮಾಪ್ತ, ಬಿಬಿಎಂಪಿ ಮಾಜಿ ಮೇಯರ್ ಟಿ.ವೆಂಕಟೇಶ್ಮೂರ್ತಿ ಅವರನ್ನು ಪಕ್ಷವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ .ವೆಂಕಟೇಶ್ಮೂರ್ತಿ ಇತ್ತೀಚೆಗೆ ಕೆ.ಎಸ್.ಈಶ್ವರಪ್ಪ ಅವರು ಸಂಗೊಳ್ಳಿರಾಯಣ್ಣ ಬ್ರಿಗೇಡ್ ಸ್ಥಾಪನೆ ಮಾಡಿದಾಗ ಸಕ್ರಿಯವಾಗಿ ಪಾಲ್ಗೊಂಡಿದ್ದರು , ಪಕ್ಷ ವಿರೋಧಿ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಆರೋಪಿಸಿ ಮೂರು ದಿನಗಳ ಹಿಂದೆ ಅವರಿಗೆ ನೋಟಿಸ್ ನೀಡಲಾಗಿತ್ತು. ಇಂದು ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.ಈ ಎಲ್ಲಾ ಬೆಳವಣಿಗೆ ವಿಧಾನ ಸಭಾ ಪ್ರತಿಪಕ್ಷ ನಾಯಕ ಕೆಎಸ್ ಈಶ್ವರಪ್ಪ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ
No comments