Breaking News

ಕಂಬಳ ಪರ ತೀರ್ಪು ಬರುವ ವಿಶ್ವಾಸವಿದೆ ಬಿಎಸ್‍ವೈ


ಮಂಗಳೂರು: ರಾಜ್ಯ ಹೈಕೋರ್ಟ್ ಕಂಬಳದ ಪರವಾಗಿ ತೀರ್ಪು ನೀಡುವ ವಿಶ್ವಾಸವಿದೆ.ಜನರ ಭಾವನೆಯನ್ನು ಅರ್ಥಮಾಡಿಕೊಳ್ಳಿ, ಯಾವುದೇ ಅನಾಹುತ ಸಂಭವಿಸುವ ಮುನ್ನವೇ ಸರ್ಕಾರ ಎಚ್ಚೆತ್ತುಕೊಂಡು ಕಂಬಳಕ್ಕೆ ಅವಕಾಶ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದ್ದಾರೆ. ಕಂಬಳ ಜಾನಪದ ಕ್ರೀಡೆಯಾಗಿದ್ದು , ಸಾವಿರಾರು ವರ್ಷಗಳ ಇತಿಹಾಸವಿದೆ. ನ್ಯಾಯಾಲಯದ ಮೇಲೆ ವಿಶ್ವಾಸವಿರಲಿ. ಹೋರಾಟದ ಹಾದಿ ಬೇಡ ಎಂದು ಇದೇ ವೇಳೆ ಸಲಹೆ ನೀಡಿದ್ದಾರೆ. 
ಇದೇ ಜನವರಿ 25 ರಂದು ಕೇಂದ್ರ ಸಚಿವ ರವಿಶಂಕರ ಪ್ರಸಾದ್ ಮಂಗಳೂರಿಗೆ ಆಗಮಿಸಲಿದ್ದು, ಈ ವೇಳೆ ಕಂಬಳದ ಕುರಿತಂತೆ ಅವರಲ್ಲಿ ಜಿಲ್ಲಾ ಬಿಜೆಪಿ ನಾಯಕರು ಮಾತುಕತೆ ನಡೆಸಲಿದ್ದಾರೆ ಎಂದು ಯಡಿಯೂರಪ್ಪ ತಿಳಿಸಿದರು.


loading...

No comments