Breaking News

ಕೃಷ್ಣ ಜೊತೆ ಮಾತುಕತೆ ನಡೆಸಲು ಮುಂದಾದ ಸಿದ್ದು


ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು ಕಾಂಗ್ರೆಸ್ ತ್ಯಜಿಸಿರುವುದರಿಂದ ಪಕ್ಷದಲ್ಲಿ ಉಂಟಾಗುತ್ತಿರುವ ತಳಮಳವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೃಷ್ಣ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲು ಮುಂದಾಗಿದ್ದಾರೆ.
ಪಕ್ಷ ತ್ಯಜಿಸುವ ತೀರ್ಮಾನ ಕೈಗೊಂಡ ನಂತರ ಕೃಷ್ಣ ಅವರನ್ನು ನಾನು ಭೇಟಿ ಮಾಡಿಲ್ಲ ಶೀಘ್ರವೇ ಅವರ ಬಳಿ ಹೋಗಿ ಮಾತನಾಡಿ ಪಕ್ದಲ್ಲಿ ಉಳಿಸಿಕೊಳ್ಳಲು ಮನವೊಲಿಕೆ ನಡೆಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಆಗಮಿಸಿದ ಅವರು ವಿಮಾನನಿಲ್ದಾಣದ ಬಳಿ ಸುದ್ದಿಗಾರೊಂದಿಗೆ ಮಾತನಾಡಿ ಕಾಂಗ್ರೆಸ್ ಎಲ್ಲ ವರ್ಗ, ಎಲ್ಲಾ ವಯೋಮಾನದವರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಪಕ್ಷವಾಗಿದೆ ನಾನು ಕೃಷ್ಣ ಅವರ ಜೊತೆ ಮಾತನಾಡಿ ಪಕ್ಷದಲ್ಲಿಯೇ ಉಳಿಸಿಕೊಳ್ಳುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
loading...

No comments