Breaking News

ಮಂಗಳೂರು ಬಂದ್ ಹಿನ್ನಲೆ ಜನಜೀವನ ಅಸ್ತವ್ಯಸ್ತ , ಕಲ್ಲುತೂರಾಟ, ಹಲವರ ಬಂಧನ


ಮಂಗಳೂರು :  ಕೇರಳ ಸಿಎಂ ಪಿಣರಾಯಿ ವಿಜಯನ್ ಆಗಮನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘರ್ಷಕ್ಕೆ ಎಡೆಮಾಡಿದೆ.ಹಲವೆಡೆ ಸಾರಿಗೆ ಸಂಸ್ಥೆಯ ಬಸ್‍ಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. 


ಲಾರಿಯೊಂದಕ್ಕೆ ಬೆಂಕಿ ಹಚ್ಚಿದ್ದು ಬಿಗು ಪರಿಸ್ಥಿತಿ ಉಂಟಾಗಿದೆ. ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ತೆರಳಲಾಗದೆ ಪರದಾಡಬೇಕಾಗಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಲವೆಡೆ ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ ಹಚ್ಚಲಾಗಿದ್ದು ಜಿಲ್ಲೆಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.





 ಕಂಕನಾಡಿಯಲ್ಲಿ ಸರ್ಕಾರಿ ಬಸ್ಸೊಂದರ ಮೇಲೆ ಕಲ್ಲು ತೂರಾಟ ನಡೆಸಿದ ಬಗ್ಗೆ ವರದಿಯಾಗಿದ್ದು, ಪಡೀಲ್ನಲ್ಲಿ ರಸ್ತೆಯಲ್ಲಿ ಟೈರ್ಗೆ ಬೆಂಕಿ ಹಾಕಲಾಗಿದೆ. ಈಗಾಗಲೆ 10ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ.ಖಾಸಗಿ ವಾಹನಗಳು ವಿರಳವಾಗಿ ಸಂಚರಿಸುತ್ತಿದ್ದು, ಕೆಲವೆಡೆ ಸರ್ಕಾರಿ ಬಸ್ ಮತ್ತು ಖಾಸಗಿ ಬಸ್ ಗಳ ಸಂಚಾರ ಸ್ಥಗಿತಗೊಳಿಸಿವೆ 


loading...

No comments