Breaking News

ತಲಪಾಡಿಯಲ್ಲಿ ಕೇರಳ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ ಕಿಡಿಗೇಡಿಗಳು

ಮಂಗಳೂರು : ಕಾಸರಗೋಡಿನಿಂದ ಮಂಗಳೂರಿಗೆ ಬರುತಿದ್ದ ಕೇರಳ ಸರ್ಕಾರದ  ಬಸ್ ಮೇಲೆ ತಲಪಾಡಿ ಸಮೀಪ ಇಂದು ರಾತ್ರಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ವರದಿ ಆಗಿದೆ. ಸ್ಥಳದಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿದೆ. ಘಟನೆ ಬಗ್ಗೆ ಮಾಹಿತಿ ಪಡೆದ ಪೋಲೀಸರು ತಕ್ಷಣ ಸ್ಥಳಕ್ಕಾಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

ಕೇರಳ ಮುಖ್ಯ ಮಂತ್ರಿ ಪಿಣರಾಯಿ ವಿಜಯನ್ ಮಂಗಳೂರು  ಭೇಟಿ ಹಿನ್ನಲೆಯಲ್ಲಿ ಹಿಂದೂ ಸಂಘಟನೆಗಳು ತೀವ್ರ ವಿರೋಧ ವ್ಯಕ್ತ ಪಡಿಸಿ ಪ್ರತಿಭಟನೆ ನಡೆಸಿದ್ದವು ,ಜಿಲ್ಲೆಯಲ್ಲಿ ಸಿಪಿಎಂ ಮತ್ತು ಸಂಘ ಪರಿವಾರದ ನಡುವೆ ಸಂಘರ್ಷ ನಡೆಯುವ ಸಾಧ್ಯತೆ ಇರುವುದರಿಂದ ಜಿಲ್ಲೆಯಲ್ಲಿ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ .ಇಷ್ಟೆಲ್ಲ ಭದ್ರತೆ ನಡುವೆ ಇಂದು ರಾತ್ರಿ ಕಿಡಿಗೇಡಿಗಳು ಕೇರಳ ಸರ್ಕಾರದ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ .ಬಸ್ಸಿನ ಮುಂಭಾಗ ತೀವ್ರ ಹಾನಿಯಾಗಿದೆ ಎಂದು ತಿಳಿದು ಬಂದಿದೆ .
loading...

No comments