Breaking News

​ ಶಿಕಾರಿಪುರದಿಂದಲೇ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುತೇನೆ : ಬಿಎಸ್‌ವೈ


ಶಿಕಾರಿಪುರ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಶಿಕಾರಿಪುರದಿಂದಲೇ ಸ್ಪರ್ಧಿಸುವುದಾಗಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಸ್ಪಷ್ಟಪಡಿಸಿದರು.

ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿ,‘ನಾನು ಇಲ್ಲಿಯೇ ಸ್ಪರ್ಧಿಸಬೇಕೆಂಬುದು ಅಭಿಮಾನಿಗಳ ಅಪೇಕ್ಷೆ. ಬೇರೆಡೆ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ತಾಲೂಕಿನ ಜನತೆ ನನಗೆ ರಾಜಕೀಯ ಶಕ್ತಿ ನೀಡಿದವರು,’ ಎಂದರು.

‘ರಾಜ್ಯ ಸರಕಾರದ ಆಡಳಿತ ವೈಖರಿಯಿಂದ ಬೇಸತ್ತಿರುವ ಕಾಂಗ್ರೆಸ್‌ ನಾಯಕರು ದೊಡ್ಡ ಸಂಖ್ಯೆಯಲ್ಲಿ ಬಿಜೆಪಿ ಸೇರುತ್ತಿದ್ದು, ಚುನಾವಣೆ ವೇಳೆಗೆ ರಾಜ್ಯ ಕಾಂಗ್ರೆಸ್‌ನ 10-15 ಶಾಸಕರು ಬಿಜೆಪಿಗೆ ಸೇರಲಿದ್ದಾರೆ. ಕಾರವಾರದ ನಾಲ್ವರು, ಮಂಡ್ಯ, ಮೈಸೂರು, ಹಾಸನ ಭಾಗದ ಹಲವರು ಪಕ್ಷ ಕ್ಕೆ ಸೇರುವುದು ನಿಶ್ಚಿತವಾಗಿದೆ. ಜಿಲ್ಲೆಯಲ್ಲಿ 5-6 ಸ್ಥಾನ ಗೆಲ್ಲುವ ಸಾಧ್ಯತೆಯಿದ್ದು, ಈ ಕುರಿತು ಈಶ್ವರಪ್ಪ ಅವರೊಂದಿಗೆ ಮಾತುಕತೆ ನಡೆಸಲಾಗಿದೆ,’ ಎಂದರು.
vk



loading...

No comments