Breaking News

ಜಯಲಲಿತನವರಿಗೆ ಮಗ ಇದ್ದಾನೆ ಅಂತೇ ?



ಚೆನ್ನೈ :   ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರು ಮೃತಪಟ್ಟು ನಾಲ್ಕು ತಿಂಗಳೇ ಕಳೆದು ಹೋಗಿದೆ. ಇದೀಗ ನಾನೇ ಅವರ ಮಗ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬರು ಮುಂದೆ ಬಂದಿದ್ದು, ಅವರ ಆಸ್ತಿಗಳಿಗೆಲ್ಲಾ ನಾನೇ ನಿಜವಾದ ವಾರಸ್ದಾರ ಎಂದು ಹೇಳುತ್ತಿದ್ದಾರೆ.

ತಮಿಳುನಾಡಿನ ಈರೋಡ್ ಮೂಲದ ಕೃಷ್ಣಮೂರ್ತಿ ಎಂಬಾತನೇ ಜಯಲಲಿತ ಅವರ ಮಗ ಎಂದು ಹೇಳಿಕೊಂಡು ಹೊಸ ವಿವಾದ ಸೃಷ್ಠಿಸುತ್ತಿದ್ದಾರೆ. ಜಯ ಅವರು ನಿಧನರಾಗಿ ನಾಲ್ಕು ತಿಂಗಳು ಕಳೆದ ಬಳಿಕ ಅವರನ್ನೇ ಕೇಂದ್ರೀಕರಿಸಿಕೊಂಡು ದಿನಕ್ಕೊಂದು ವಿವಾದಗಳು ಹುಟ್ಟಿಕೊಳ್ಳುತ್ತಿದೆ. ಆ ಸಾಲಿಗೆ ಇದು ಸೇರಿಕೊಳ್ಳಲಿದೆ.

ಈಗ ನಾನೇ ಜಯಲಲಿತಾ ಅವರ ಮಗ ಎಂದು ಹೇಳಿಕೊಂಡು ಮುಂದೆ ಬಂದಿರುವ ವ್ಯಕ್ತಿಯೊಬ್ಬರು  ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮುಂದೆ ದೂರನ್ನು ದಾಖಲಿಸಿದ್ದಾರೆ. ಜಯಲಲಿತಾ ಅವರ ಮಗನಾಗಿರುವ ನಾನು ಅಮ್ಮಾ ಅವರ ಸ್ನೇಹಿತೆ ವನಿತಾಮಣಿ ಅವರ ಮನೆಯಲ್ಲಿ ವಾಸವಾಗಿದ್ದೇನೆ. ನನ್ನ ಜೊತೆಗೆ ನನ್ನನ್ನು ದತ್ತು ಪಡೆದಿರುವ ಹೆತ್ತವರೂ ಇದ್ದಾರೆ. ಕಳೆದ ವರ್ಷದ ಸೆಪ್ಟೆಂಬರ್ 14ರಂದು ನಾನು ಚೆನ್ನೈನ ಪೆÇೀಯಸ್ ಗಾರ್ಡನ್‍ನಲ್ಲಿರುವ ಜಯಾ ಅವರ ಮನೆಗೆ ಹೋಗಿದ್ದೆ. ಅಮ್ಮಾ ಅವರ ಜೊತೆಗೆ ನಾಲ್ಕು ದಿನ ತಂಗಿದ್ದೆ ಅಂತ ಕೃಷ್ಣಮೂರ್ತಿ ಹೇಳಿದ್ದಾರೆ.

ನನ್ನನ್ನು ತಮ್ಮ ಮಗ ಎಂದು ಬಹಿರಂಗವಾಗಿ ಹೇಳಿಕೊಳ್ಳಲು ಜಯಲಲಿತಾ ನಿರ್ಧರಿಸಿದ್ದರು. ಈ ಹಿನ್ನೆಲೆಯಲ್ಲಿ ಜಯಲಲಿತಾ ಹಾಗೂ ಶಶಿಕಲಾರ ನಡುವೆ ಜಗಳ ನಡೆದಿತ್ತು. ಸೆಪ್ಟೆಂಬರ್ 22ರಂದು ನಡೆದ ಈ ಗಲಾಟೆಯಲ್ಲಿ ಶಶಿಕಲಾ ಜಯಾರನ್ನು ಮಹಡಿಯಿಂದ ಕೆಳಕ್ಕೆ ತಳ್ಳಿ ಕೊಲೆ ಮಾಡಿದ್ದಾರೆ ಎಂದು ಕೃಷ್ಣಮೂರ್ತಿ ಆರೋಪಿಸಿದ್ದಾರೆ.

ನನಗೆ ಜೀವಬೆದರಿಕೆ ಇತ್ತು. ಆರೆ ಸತ್ಯ ಹೇಳಲು ಧೈರ್ಯ ಮಾಡಿದ್ದೇನೆ. ಜಯಲಲಿತಾ ಅವರ ಮಗನಾಗಿರುವ ಕಾರಣ ಅವರ ಆಸ್ತಿಗಳಿಗೆಲ್ಲಾ ನಾನೇ ನಿಜವಾದ ವಾರಸ್ದಾರ ಎಂದು ಕೃಷ್ಣಮೂರ್ತಿ ಅವರು  ಸರ್ಕಾರದ ಮುಖ್ಯ ಕಾರ್ಯದರ್ಶಿ ಮುಂದೆ  ವಾದಿಸಿದ್ದಾರೆ. ಈ ಹಿಂದೆ ಪ್ರಿಯಾ ಲಕ್ಷ್ಮಿ ಎಂಬಾಕೆ ನಾನು ಜಯಲಲಿತಾ ಮತ್ತು ಎಂಜಿರ್ ಅವರ ಪುತ್ರಿ ಎಂದು ಹೇಳಿಕೊಂಡು ಮುಂದೆ ಬಂದಿದ್ದರು. ಆದ್ರೆ ಅಕೆಯ ಹೇಳಿಕೆ ಸುಳ್ಳು ಎಂದು ಪತ್ತೆ ಮಾಡಿದ ಪೊಲೀಸರು  ವಂಚನೆ ಆರೋಪದಡಿ ಆಕೆಯನ್ನು ಬಂಧಿಸಿದ್ದರು.

-sanje vani 
loading...

No comments