Breaking News

ಆತ್ಯಾಚಾರ ಆರೋಪಿ ಜೈಲಿನಿಂದ ಪರಾರಿ


ಮಂಗಳೂರು : ನಗರದ ಜೈಲಿನಿಂದ ವಿಚಾರಣಾಧೀನ ಕೈದಿಯೊಬ್ಬ ಎಸ್ಕೇಪ್ ಆಗಿದ್ದಾನೆ. ಅತ್ಯಾಚಾರ ಯತ್ನ ಪ್ರಕರಣದ ಆರೋಪಿ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಬೊಲ್ಕಲ ಮನೆಯ ಚೆನ್ನಪ್ಪ ಎಂಬವರ ಪುತ್ರ ಜಿನ್ನಪ್ಪ ಪರವ (37) ಮೊನ್ನೆ ತಡರಾತ್ರಿ 3 ಗಂಟೆಗೆ ಜೈಲಿನಿಂದ ಪರಾರಿಯಾಗಿದ್ದಾನೆ.
ಈತ ಹಲವಾರು ಪ್ರಕರಣಗಳಲ್ಲಿ ಶಾಮೀಲಾಗಿದ್ದ ಎಂದು ಹೇಳಲಾಗುತ್ತಿದೆ. 2015ರಲ್ಲಿ ನಡೆದಿದ್ದ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಎದುರಿಸುತ್ತಿದ್ದು, ಈತನನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಿ ಜೈಲಿನಲ್ಲಿ ಇರಿಸಲಾಗಿತ್ತು. 2015ರಿಂದ ಈತ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿದ್ದ. ಈತ ಜೈಲಿನಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ.

loading...

No comments