Breaking News

ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿದ್ದಾರೆ ಅಂಗನವಾಡಿ ಕಾರ್ಯಕರ್ತೆಯರು



ಬೆಂಗಳೂರು :ಐಸಿಡಿಎಸ್‌ ಕಾರ್ಯಕ್ರಮಗಳಿಗೆ ಕೇಂದ್ರ ಸರ್ಕಾರ ಅನುದಾನ ಕಡಿಮೆ ಮಾಡಿರು ವುದನ್ನು ವಿರೋಧಿಸಿ ಸದ್ಯದಲ್ಲೇ ರಾಜ್ಯ ದಲ್ಲಿರುವ ಕೇಂದ್ರ ಸಚಿವರು, ಸಂಸದರ ಮನೆ ಮುಂದೆ ಧರಣಿ ಆರಂಭಿಸಲಾಗುವುದು ಎಂದು ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ವರಲಕ್ಷ್ಮಿ ಹೇಳಿದ್ದಾರೆ.
ಅಂಗನವಾಡಿ ವಿಚಾರದಲ್ಲಿ ಕೇಂದ್ರ ಸರ್ಕಾರ ಮಾಡಿರುವ ಅನ್ಯಾಯದ ವಿರುದ್ಧ ರಾಜ್ಯ ಸರ್ಕಾರ ಖಂಡನಾ ನಿರ್ಣಯ ಕೈಗೊಳ್ಳಬೇಕಿದೆ. ಈ ಬಗ್ಗೆ ನಾವು ಸಲಹೆ ನೀಡಿದ್ದೇವೆ. ಇದರೊಂದಿಗೆ ಕೇಂದ್ರದ ವಿರುದ್ಧ ಹೋರಾಟ ರೂಪಿಸು ತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ.
loading...

No comments