Breaking News

ರಾಖಿ ಸಾವಂತ್ ವಿರುದ್ಧ ಅರೆಸ್ಟ್‌ ವಾರೆಂಟ್


ಮುಂಬೈ: ರಾಖಿ ಸಾವಂತ್ ಕಳೆದ ವರ್ಷ ಟಿವಿ ಚಾನಲ್‌'ವೊಂದರ ಕಾರ್ಯಕ್ರಮದಲ್ಲಿ ಹಿಂದುಗಳ ಮಹಾ ಗ್ರಂಥ ರಾಮಾಯಣದ ಸೃಷ್ಟಿಕರ್ತ ವಾಲ್ಮೀಕಿ, ವಾಲ್ಮೀಕಿ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು.
ಈ ಬಗ್ಗೆ ಸಮುದಾಯದ ಜನತೆಯ ಭಾವನೆಗಳಿಗೆ ಧಕ್ಕೆ ಆಗಿದೆ ಎಂದು ರಾಖಿ ವಿರುದ್ಧ ಕೇಸ್ ದಾಖಲಾಗಿತ್ತು. ಇದೀಗ ಬಾಲಿವುಡ್ ನಟಿ ರಾಖಿ ಸಾವಂತ್ ವಿರುದ್ಧ ಲೂಧಿಯಾನ ಕೋರ್ಟ್‌ ಅರೆಸ್ಟ್‌ ವಾರೆಂಟ್ ಜಾರಿ ಮಾಡಿದೆ.
ಈ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಹಲವು ಬಾರಿ ಸಮನ್ಸ್  ಜಾರಿ ಮಾಡಿದರೂ ರಾಖಿ ವಿಚಾರಣೆಗೆ ಹಾಜರಾಗಿಲ್ಲ ಎನ್ನಲಾಗಿದೆ.
ಹೀಗಾಗಿ ಕಳೆದ ಮಾರ್ಚ್‌ 9 ರಂದು ನ್ಯಾಯಾಲಯ ರಾಖಿ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ ಮಾಡಿದೆ. ಪ್ರಕರಣವನ್ನು ಏಪ್ರಿಲ್ 10ಕ್ಕೆ ಮುಂದೂಡಿದೆ. ಕೋರ್ಟ್ ಆದೇಶದ ಮೇರೆಗೆ ಲೂಧಿಯಾನ ಪೊಲೀಸರು ಅರೆಸ್ಟ್‌ ವಾರೆಂಟ್‌'ನೊಂದಿಗೆ ಮುಂಬೈಗೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.


loading...

No comments