Breaking News

ಕೃಷ್ಣ ಪರಮಾತ್ಮನ ನಿಂದಿಸಿದ : ಪ್ರಶಾಂತ್ ಭೂಷಣ್



ನವದೆಹಲಿ : ಶ್ರೀಕೃಷ್ಣ ಹುಡುಗಿಯರನ್ನು ಚುಡಾಯಿಸುವುದರಲ್ಲಿ ನಿಸ್ಸೀಮ ಎಂದು ಮಾಜಿ ಆಮ್ ಆದ್ಮಿ ಮುಖಂಡ ಪ್ರಶಾಂತ್ ಭೂಷಣ್ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ .ಉ.ಪ್ರ. ಸಿಎಂ ಯೋಗಿ ಆದಿತ್ಯನಾಥ್ ಅವರು ಜಾರಿಗೆ ತಂದ ಆ್ಯಂಟಿ ರೋಮಿಯೋ ಕಾರ್ಯಾಚರಣೆಯನ್ನು ಖಂಡಿಸಿ ಈ ರೀತಿಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ .

ಪ್ರಶಾಂತ್ ಭೂಷಣ್  ಅವರ ಅವಹೇಳನ ಹೇಳಿಕೆ ಬಗ್ಗೆ  ಬಿಜೆಪಿ ಮುಖಂಡ ತಜೀಂದರ್ ಪಾಲ್ ಸಿಂಗ್ ಅವರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ತಿಲಕ್ ಮಾರ್ಗ್ ಠಾಣೆಯ ಪೊಲೀಸರು ದೂರನ್ನು ಸ್ವೀಕರಿಸಿದ್ದಾರಾದರೂ ಎಫ್'ಐಆರ್'ನ್ನು ಇನ್ನೂ ದಾಖಲಿಸಿಲ್ಲ ಎಂದು ತಿಳಿದು ಬಂದಿದೆ .

loading...

No comments