Breaking News

ಪೊಲೀಸ್ ಆಯುಕ್ತ ಪ್ರವೀಣ್‍ಸೂದ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಪ್ರತಾಪ್ ಸಿಂಹ



ಬೆಂಗಳೂರು : ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ವಿರುದ್ಧ ಫೇಸ್​'ಬುಕ್​ನಲ್ಲಿ ಅವಹೇಳನಕಾರಿಯಾಗಿ ಬರೆದಿದ್ದವರ ವಿರುದ್ಧ ಎಫ್'ಐಆರ್ ದಾಖಲಿಸದ ಬೆಂಗಳೂರು ಪೊಲೀಸರ ವಿರುದ್ಧ ಬಿಜೆಪಿ ಸಂಸದ ಫೇಸ್‍ಬುಕ್‍ನಲ್ಲಿ ವಿಡಿಯೋ ಒಂದನ್ನು ಅಪ್ಲೋಡ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಕಾರ್ಯಕರ್ತೆ ಪ್ರಭಾ ಬೆಳವಂಗಲ ಫೇಸ್‍ಬುಕ್‍ನಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಅವರ ಅವಹೇಳನಕಾರಿ ಪೋಸ್ಟ್ ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಾವು ದೂರು ನೀಡಿದ್ದರೂ ಪೊಲೀಸರು ಇನ್ನು ಯಾಕೆ ಕ್ರಮವನ್ನು ಕೈಗೊಂಡಿಲ್ಲ ಎಂದು ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ.ಒಬ್ಬ ಸಂಸದನಿಗೆ ಪ್ರತಿಕ್ರಿಯಿಸುವುದಿಲ್ಲ ಎಂದರೆ ಅರ್ಥ ಏನು? ಸಂಸದರಿಗೆ ಸ್ಪಂದನೆ ಇಲ್ಲ ಅಂದರೆ ಜನಸಾಮಾನ್ಯರಿಗೆ ಸ್ಪಂದಿಸುತ್ತಾರಾ? ಪೊಲೀಸ್​ ಕಂಟ್ರೋಲ್​ ರೂಂ ಅಸ್ವಸ್ಥವಾಗಿದೆ ಎಂದು 108 ಗೆ ಪೋನ್​ ಮಾಡಬೇಕಾ? ಎಂದು ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತ ಪಡಿಸಿದ್ದಾರೆ 
loading...

No comments