Breaking News

ವಿಕಲಾಂಗ ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ ಯುವಕ


ಭುವನೇಶ್ವರ: ದೇವಾಲಯದಲ್ಲಿ ವಿಕಲಾಂಗ ಅಪ್ರಾಪ್ತೆಯ ಮೇಲೆ ಯುವಕನೊಬ್ಬ ಅತ್ಯಾಚಾರ ನಡೆಸಿರುವ ಘಟನೆ ಓಡಿಶಾದ ಬಾರಿಪಾದಾದಲ್ಲಿ ನಡೆದಿದೆ.

ಇಲ್ಲಿನ ಸ್ವಾಮಿ ಜಗನ್ನಾಥ ದೇವಾಲಯದಲ್ಲಿ ಶುಕ್ರವಾರ ರಾತ್ರಿ 11 ವರ್ಷದ ಬಾಲಕಿ ದೇವರ ದರ್ಶನ ಪಡೆಯಲು ದೇವಸ್ಥಾನಕ್ಕೆ ಹೋಗಿದ್ದಳು. ಈ ವೇಳೆ ದೇವಸ್ಥನ ನಿರ್ಜನವಾಗಿತ್ತು. ಈ ವೇಳೆ ದೇವಸ್ಥಾನದಲ್ಲಿದ್ದ 28 ವರ್ಷದ ಯುವಕ ಬಾಲಕಿಯನ್ನು ಮಂಟಪದ ಬಳಿ ಎಳೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಸಂತ್ರಸ್ತೆಯನ್ನು ಸ್ಥಳದಿಂದ ರಕ್ಷಿಸಲಾಗಿದ್ದು, ಆಕ್ರೋಶಗೊಂಡ ಸ್ಥಳೀಯರು ಯುವಕನನ್ನು ಪತ್ತೆಹಚ್ಚು ಚೆನ್ನಾಗಿ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಬಾಲಕಿಯ ಸ್ಥಿತಿ ಗಂಭೀರವಾಗಿದ್ದರಿಂದ ಆಕೆಯನ್ನು ಕಟಕ್‍ನ ಎಸ್‍ಸಿಬಿ ಮೆಡಿಕಲ್ ಕಾಲೇಜಿನ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಪೊಲೀಸರು ಹೇಳಿದ್ದಾರೆ.

loading...

No comments