Breaking News

ಪೊಲೀಸ್ ಜೀಪ್‌ನಲ್ಲೇ ಕುಸಿದು ಬಿದ್ದು ಮೃತಪಟ್ಟ ಯುವಕ



ಕಾಸರಗೋಡು:  ಕಸ್ಟಡಿಗೆ ಪಡೆಯುವ ವೇಳೆ ಯುವಕನೋರ್ವ ಪೊಲೀಸ್ ಜೀಪ್‌ನಲ್ಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ನಿನ್ನೆ ಕಾಸರಗೋಡಿನಲ್ಲಿ ನಡೆದಿದೆ. ಪೊಲೀಸ್ ದೌರ್ಜನ್ಯದಿಂದಲೇ ಮೃತಪಟ್ಟಿದ್ದಾನೆ ಎಂದು ಆರೋಪಿಸಿ ಮೃತ ಯುವಕನ ಸಹೋದರ ಕಾಸರಗೋಡು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣವನ್ನು ಖಂಡಿಸಿ ಇಂದು ಕಾಸರಗೋಡು ಜಿಲ್ಲಾ ಬಂದ್‌ಗೆ ಬಿಜೆಪಿ ಕರೆ ನೀಡಿದೆ.

ಮೃತಪಟ್ಟ ಯುವಕನನ್ನು ಚೌಕಿ ಕ್ವಾರ್ಟಸ್ ಸನಿಹದ ನಿವಾಸಿ, ಬಿಎಂಎಸ್ ಕಾರ್ಯಕರ್ತ ಸಂದೀಪ್ (೨೭) ಎಂದು ಗುರುತಿಸಲಾಗಿದೆ. ಈತ ಇಲ್ಲಿನ ಸರ್ಕಾರಿ ಬೀಜೋತ್ಪಾದನಾ ಕೇಂದ್ರದ ಬಳಿ ಕೆಲವರು ಜೊತೆಗೂಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ದೂರು ನೀಡಿದ್ದರು. ಈ ವೇಳೆ ನಿನ್ನೆ ಪೊಲೀಸರು ದಾಳಿ ನಡೆಸಿ, ಆರೋಪಿಗಳನ್ನು ವಶಪಡಿಸಿಕೊಂಡಿದ್ದರು ಎನ್ನಲಾಗಿದೆ. ಈ ವೇಳೆ ಸಂದೀಪ್ ಪೊಲೀಸ್ ಜೀಪ್‌ನಲ್ಲೇ ಕುಸಿದು ಬಿದ್ದರು ಎನ್ನಲಾಗಿದೆ. ಆದರೆ ಸಂದೀಪ್ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಬಿಎಂಎಸ್ ಕಾರ್ಯಕರ್ತರು ನಗರ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ದೌರ್ಜನ್ಯ ನಡೆಸಿದ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಬೇಕೆಂದು ಇದೇ ವೇಳೆ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಆದರೆ ದೌರ್ಜನ್ಯ ನಡೆಸಿದ ವಿಚಾರವನ್ನು ಪೊಲೀಸರು ತಳ್ಳಿಹಾಕಿದ್ದಾರೆ.



loading...

No comments