Breaking News

ಬಿ ಎಸ್ ವೈ ಅವರನ್ನು ಕರ್ನಾಟಕ ಬಿಜೆಪಿ ಸಿಎಂ ಅಭ್ಯರ್ಥಿ ಘೋಷಿಸಿದ ಅಮಿತ್ ಶಾ


ನವದೆಹಲಿ : 2018 ವಿಧಾನಸಭೆ ಚುನಾವಣೆಗೆ  ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರೇ ಸಿಎಂ ಅಭ್ಯರ್ಥಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಂದು ದೆಹಲಿಯಲ್ಲಿ ಹೇಳಿದ್ದಾರೆ.
 ಯಡಿಯೂರಪ್ಪ ನೇತೃತ್ವದಲ್ಲಿ 2018ರ ಕರ್ನಾಟಕ ವಿಧಾನಸಭೆ ಚುನಾವಣೆಯನ್ನು ಎದುರಿಸುತ್ತೇವೆ ಎಂದು ಅಮಿತ್ ಶಾ ಹೇಳಿದರು.
ಕಮಲ ಪಾಳಯದಲ್ಲಿ ನಡೆದ ಈ ಬೆಳವಣಿಗೆಯಿಂದ ಬಿಜೆಪಿಯ ಸಿಎಂ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ತೆರೆಬಿದ್ದಿದೆ ಮತ್ತು ಯಡಿಯೂರಪ್ಪ ಅವರ ವಿರೋಧಿ ಬಣದಲ್ಲಿ ಗುರುತಿಸಿಕೊಂಡವರಿಗೆ ಈ ಘೋಷಣೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

No comments