Breaking News

ಬಾಂಗ್ಲಾದೇಶವನ್ನು ಸದೆಬಡಿದು ಫೈನಲ್‌ಗೆ ಲಗ್ಗೆ ಇಟ್ಟ ಭಾರತ


ಬರ್ಮಿಂಗ್‌ಹ್ಯಾಮ್: ಐಸಿಸಿ ಚಾಂಪಿಯನ್ಸ್ ಟ್ರೋಫಿ 2017 ಏಕದಿನ ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ಗುರುವಾರ ಬಾಂಗ್ಲಾದೇಶ ವಿರುದ್ಧ ನಡೆದ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಆರಂಭಿಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಅವರ ಅಮೋಘ ಶತಕ (123*) ಹಾಗೂ ನಾಯಕ ವಿರಾಟ್ ಕೋಹ್ಲಿ ಅವರ ಆಕರ್ಷಕ ಅರ್ಧಶತಕದ (96*) ನೆರವಿನಿಂದ ಎಂಟು ವಿಕೆಟ್‌ಗಳ ಅಂತರದ ಅಧಿಕಾರಯುತ ಗೆಲುವು ದಾಖಲಿಸಿರುವ ಭಾರತ ತಂಡವು ಫೈನಲ್‌ಗೆ ಲಗ್ಗೆಯಿಟ್ಟಿದೆ.
ಭಾರತ ತಂಡ ಭಾನುವಾರ ನಡೆಯಲಿರುವ ಫೈನಲ್​ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ.

ಬಾಂಗ್ಲಾದೇಶ ನೀಡಿದ 265 ರನ್​ ಗುರಿಯನ್ನು ಬೆನ್ನತ್ತಿದ ಭಾರತ ತಂಡ ಕೇವಲ 40.1 ಓವರ್​ಗಳಲ್ಲಿ 1 ವಿಕೆಟ್​ ಕಳೆದುಕೊಂಡು 265 ರನ್​ ಗಳಿಸುವ ಮೂಲಕ ಗೆಲುವಿನ ಗುರಿ ಮುಟ್ಟಿತು. ಭಾರತದ ಪರ ಇನಿಂಗ್ಸ್​ ಆರಂಭಿಸಿದ ಶಿಖರ್​ ಧವನ್​ (46) ಮತ್ತು ರೋಹಿತ್​ ಶರ್ಮಾ ಮೊದಲ ವಿಕೆಟ್​ಗೆ 87 ರನ್​ ಜತೆಯಾಟವಾಡಿ ತಂಡಕ್ಕೆ ಭದ್ರ ಬುನಾದಿ ಒದಗಿಸಿದರು. ಧವನ್​ ಔಟಾದ ನಂತರ ಕ್ರೀಸ್​ಗೆ ಇಳಿದ ವಿರಾಟ್​ ಕೊಹ್ಲಿ ರೋಹಿತ್​ ಶರ್ಮಾಗೆ ಉತ್ತಮ ಸಾಥ್​ ನೀಡಿ ತಂಡವನ್ನು ಗೆಲುವಿನ ದಡ ಸೇರಿಸಿದರು.

No comments