Breaking News

ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೂ ಉಚಿತ ಪಾಸ್‌ ವಿತರಣೆ !



ಬೆಂಗಳೂರು: ರಾಜ್ಯದ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡದ ವಿದ್ಯಾರ್ಥಿಗಳಿಗೆ ರಾಜ್ಯ ರಸ್ತೆ ಸಾರಿಗೆಯ ನಾಲ್ಕು ನಿಗಮಗಳ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕಾಗಿ ಬಸ್‌ ಪಾಸ್‌ ನೀಡುವ ಯೋಜನೆ ಈಗಾಗಲೇ ಕಾರ್ಯಗತಗೊಂಡಿದ್ದು, ಸಾಮಾನ್ಯ ವಿದ್ಯಾರ್ಥಿ ಗಳಿಗೂ ಈ ಯೋಜನೆ ವಿಸ್ತರಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಕೆಂಪೇಗೌಡ ಬಸ್‌ ನಿಲ್ದಾಣದಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಿಎಂ ಟಿಸಿ ಸ್ಮಾರ್ಟ್‌ ಕಾರ್ಡ್‌, ಹೊಸ ಬಸ್‌ಗಳು ಹಾಗೂ ನಿಲ್ದಾಣದಲ್ಲಿ ನವೀಕೃತ ಪಾದಚಾರಿ ಮೇಲ್ಸೇತುವೆ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಪ.ಜಾತಿ ಮತ್ತು ಪಂಗಡದ ವಿದ್ಯಾ ರ್ಥಿಗಳಿಗೆ ಪ್ರಸಕ್ತ ಸಾಲಿನಿಂದ ಉಚಿತ ಬಸ್‌ ಪಾಸ್‌ ನೀಡಲು ತೀರ್ಮಾನಿಸಲಾಗಿತ್ತು. ಇದೀಗ ರಾಜ್ಯ ರಸ್ತೆ ಸಾರಿಗೆ ನಿಗಮ, ಈಶಾನ್ಯ ಹಾಗೂ ವಾಯವ್ಯ ನಿಗಮದ ಬಸ್‌ಗಳಲ್ಲಿ ಪ್ರಯಾಣಿಸಲು ಉಚಿತ ಬಸ್‌ ನೀಡಲು ನಿರ್ಧರಿಸಲಾಗಿದೆ ಎಂದರು.

No comments