Breaking News

ಸಂಘ ಪರಿವಾರದಲ್ಲಿ ಗುರುತಿಸಿಕೊಂಡು ರಮೇಶ್ ಭಟ್ ಕಲ್ಪುರೆಗೆ ತಂಡದಿಂದ ಹಲ್ಲೆ



ಕಡಬ :ಸಂಘಪರಿವಾರದಲ್ಲಿ ಗುರುತಿಸಿಕೊಂಡ ರಮೇಶ್ ಭಟ್ ಕಲ್ಪನೆಗೆ ದುಷ್ಕರ್ಮಿಗಳ ತಂಡವೊಂದು ಕಬ್ಬಿಣದ ರಾಡ್ ನಿಂದ ಗಂಭೀರ ಹಲ್ಲೆ ನಡೆಸಿದ್ದ ಘಟನೆ ಕಡಬದಲ್ಲಿ ವರದಿ ಆಗಿದೆ.

ಕೃಷಿಕರಾಗಿದ್ದುಕೊಂಡು ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ರಮೇಶ್ ಭಟ್ ಕಡಬದ ಯಶೋದಾ ಸೂಪರ್ ಮಾರ್ಕೆಟ್ ಗೆ ತೆರಳಿ ಸಾಮಾಗ್ರಿ ಖರೀದಿಸಿ ತನ್ನ ಜೀಪಿನ ಹತ್ತಿರ ಆಗಮಿಸಿದ ಸಂದರ್ಭದಲ್ಲಿ ಏಕಾಏಕಿ ಮುಗಿಬಿದ್ದ ತಂಡ ಹಲ್ಲೆ ನಡೆಸಿದೆ. ಘಟನೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಕಡಬ ಪೊಲೀಸರು ಬಂಧಿಸಿದ್ದು, ಬಂಧಿತ ಆರೋಪಿಗಳನ್ನು ಕುಟ್ರುಪ್ಪಾಡಿ ಪರಿಸರದ ಪ್ರಕಾಶ, ಟಿನ್ಸನ್, ಸನೂಷ್, ಲಿಜೋ, ಸಂತೋಷ್ ಎಂದು ಗುರುತಿಸಲಾಗಿದೆ. ಘಟನೆಯ ಹಿನ್ನೆಲೆಯಲ್ಲಿ ಸೋಮವಾರದಂದು ಕಡಬ ಬಂದ್ ಗೆ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಯ ಪ್ರಮುಖರು ಕರೆ ನೀಡಿವೆ. ಇದೀಗ ಕಡಬದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಪೊಲೀಸ್ ಬಂದೋಬಸ್ತ್ ಮುಂದುವರೆಸಿದ್ದಾರೆ ಎಂದು ತಿಳಿದು ಬಂದಿದೆ. 

No comments