Breaking News

ಸಾವಿನ ಮನೆಯಲ್ಲಿ ರಾಜಕೀಯ ಮಾಡಲು ಹೊರಟ ಕಾಂಗ್ರೆಸ್ ಶಾಸಕನಿಗೆ ಸಾರ್ವಜನಿಕರಿಂದ ಮಂಗಳಾರತಿ



ಮಂಗಳೂರು : ಅನಾರೋಗ್ಯಕ್ಕೀಡಾಗಿ ಸಾವನ್ನಪ್ಪಿದ ಬಾಲಕನ ಮನೆಗೆ ತೆರಳಿದ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಶಾಸಕ ಮೊಯ್ದೀನ್ ಬಾವಾ ಅವರು ಪರಿಹಾರ ನಿಧಿಯಿಂದ ಹಣ ನೀಡಿದ್ದನ್ನೇ ಸಾರ್ವಜನಿಕರ ಮುಂದೆ ಭಾಷಣ ಬಿಗಿಯಲು ಮುಂದಾಗಿ ಮಂಗಳಾರತಿ ಮಾಡಿಸಿಕೊಂಡ ಘಟನೆ ನಡೆದಿದೆ.




ಮೆದುಳಿನ ಸಮಸ್ಯೆಯಿಂದ ಬಳಲುತ್ತಿದ್ದ ಕೂಳೂರಿನ ಪಳನೀರು ನಿವಾಸಿ ನಿಖಿಲೇಶ್ ಎನ್ನುವ ಬಾಲಕ ಶನಿವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಆ ಹಿನ್ನೆಲೆಯಲ್ಲಿ ಬಾಲಕನ ಮನೆಗೆ ಭೇಟಿ ನೀಡಿದ ಸ್ಥಳೀಯ ಶಾಸಕ ಮೊಯ್ದೀನ್ ಬಾವಾ ಅವರು ತಾನು ಬಾಲಕನ ಚಿಕಿತ್ಸೆಗಾಗಿ ೧ ಲಕ್ಷ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತೆಗೆಸಿಕೊಟ್ಟಿರುವುದಾಗಿ ಸ್ಥಳದಲ್ಲಿದ್ದವರಲ್ಲಿ ಹೇಳುತ್ತಿದ್ದರು.ಇದರಿಂದ ಆಕ್ರೋಶಕ್ಕೊಳಗಾದ ಸಾರ್ವಜನಿಕರು ಶಾಸಕರ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ಸಾವಿನ ಮನೆಯಲ್ಲಿ ಶಾಸಕರು ರಾಜಕೀಯ ಮಾಡುತ್ತಿದ್ದಾರೆಂದು ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ೨ ಲಕ್ಷ ನೀಡುವುದಾಗಿ ಭರವಸೆ ನೀಡಿದ್ದ ಶಾಸಕರು ಒಂದು ಲಕ್ಷ ಮಾತ್ರ ನೀಡಿರುವುದಲ್ಲದೆ, ಅದನ್ನು ಸಾವಿನ ಮನೆಯಲ್ಲಿ ಡಂಗುರ ಹೊಡೆಯ ಅಗತ್ಯವೇನಿತ್ತು ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದೂ ನಡೆದಿದೆ.

No comments