Breaking News

ಸೈನಡ್ ತಿಂದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ



ಉಡುಪಿ:ಒಂದೇ ಮನೆಯ ನಾಲ್ವರು ಸೈನೆಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿರ್ವ ಠಾಣಾ ವ್ಯಾಪ್ತಿಯ ಪಡುಬೆಳ್ಳೆ ಗ್ರಾಮದಲ್ಲಿ ಇಂದು ಮುಂಜಾನೆ ಬೆಳಕಿಗೆ ಬಂದಿದೆ. ಘಟನೆ ನಿನ್ನೆ ರಾತ್ರಿ ನಡೆದಿರಬೇಕೆಂದು ಶಂಕಿಸಲಾಗಿದ್ದು ಮುಂಜಾನೆ ಮನೆಯ ಬಾಗಿಲು ಮುಚ್ಚಿರುವುದನ್ನು ಕಂಡು ಪಕ್ಕದ ಮನೆಯವರು ಗಮನಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ. ಮೃತರನ್ನು ಶಂಕರ ಆಚಾರ್ಯ(೫೦), ನಿರ್ಮಲ ಆಚಾರ್ಯ(೪೪) ಮಕ್ಕಳಾದ ಶ್ರೇಯಾ(೨೨) ಮತ್ತು ಶ್ರುತಿ(೨೩) ಎಂದು ಹೆಸರಿಸಲಾಗಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ ಕೂಡ ಆರ್ಥಿಕ ಮುಗ್ಗಟ್ಟಿನಿಂದ ಆತ್ಮಹತ್ಯೆಗೆ ಶರಣಾದ ಬಗ್ಗೆ ಅಂದಾಜಿಸಲಾಗಿದೆ.ಶಿರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ತನಿಖೆ ನಡೆಯುತ್ತಿದೆ.

No comments