Breaking News

ಮಂಗಳೂರು ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಐಟಿ ಕಛೇರಿ ದ್ವಂಸ ಸಾರ್ವಜನಿಕರಿಂದ ತೀವ್ರ ಆಕ್ರೋಶ



ಮಂಗಳೂರು: ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ನಿವಾಸದ ಮೇಲಿನ ಐಟಿ ದಾಳಿಯನ್ನು ವಿರೋಧಿಸಿ ಯುತ್ ಕಾಂಗ್ರೆಸ್ಸ್ ಕಾರ್ಯರ್ತರು ಮಂಗಳೂರಿನ ಆದಾಯ ತೆರಿಗೆ ಇಲಾಖೆ ಮೇಲೆ ಕಲ್ಲು ತೂರಾಟ ನಡೆಸಿ ಸರಕಾರದ ಆಸ್ತಿಗೆ ಹಾನಿ ಮಾಡಿದ್ದಲ್ಲದೇ, ಸಾರ್ವಜನಿಕ ಸ್ಥಳದಲ್ಲಿ ಟಯರ್'ಗೆ ಬೆಂಕಿ ಹಚ್ಚಿ ಜನರಲ್ಲಿ ಭಯಬೀತ ವಾತಾವರಣ ಸೃಷ್ಟಿಸಿದ್ದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ

ಸಚಿವರು ಪ್ರಾಮಾಣಿಕರಾಗಿದ್ದರೆ ಇಷ್ಟೊಂದು ದೊಡ್ಡ ಪ್ರಮಾಣದ ಹಣ ಹೇಗೆ ಬಂತು? ಅದಕ್ಕೆ ಸಂಬಂಧಪಟ್ಟ ದಾಖಲೆಗಳೇಕೆ ಇಲ್ಲ? ಬೇನಾಮಿ ಸಂಪತ್ತಿನ ದಾಖಲೆಗಳನ್ನು ಹರಿಯಲು ಮುಂದಾಗಿದ್ದೇಕೆ?
ಇಷ್ಟು ಪಾರದರ್ಶಕವಾಗಿ ಭ್ರಷ್ಟಾಚಾರ ಬಯಲಿಗೆ ಬಂದಿದ್ದರೂ ಐಟಿ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸುವುದು ಭ್ರಷ್ಟಾಚಾರಕ್ಕೆ ಬೆಂಬಲ ಕೊಟ್ಟಂತೆಯೇ ಸರಿ ಎಂದು ಕಿಡಿಕಾರಿದರು


ಆದಾಯ ತೆರಿಗೆ ಇಲಾಖೆಯ ಮೇಲೆ ದಾಳಿ ನಡೆಸಿ ಗಾಜುಗಳನ್ನು ಪುಡಿಗೈದು ಸೊತ್ತುಗಳಿಗೆ ಹಾನಿ ಮಾಡಿದ್ದು ದೇಶದ ಇತಿಹಾಸದಲ್ಲಿ ಇದೇ ಮೊದಲು. ಅದು ನಡೆದದ್ದು ಮಂಗಳೂರಿನಲ್ಲಿ.ಅದನ್ನು ಅರವತ್ತು ವರ್ಷಗಳ ಕಾಲ ದೇಶ ಆಳಿದ ಕಾಂಗ್ರೆಸ್ ಪಕ್ಷದ ನಾಯಕರು ಎಂಬುವುದು ವಿಪರ್ಯಾಸ.

 ದಾಳಿ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಸದಸ್ಯರಾದ ಎ.ಸಿ.ವಿನಯ್ ರಾಜ್, ರಮಾನಂದ ಪೂಜಾರಿ, ಯೂತ್ ಕಾಂಗ್ರೆಸ್'ನ ಮೆರಿಲ್ ರಿಗೋ ಸೇರಿದಂತೆ ಭಾಗವಹಿಸಿದ್ದ ಎಲ್ಲರನ್ನೂ ಪೊಲೀಸರು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಭಾರತೀಯ ಜನತಾ ಪಾರ್ಟಿ ಮಂಗಳೂರು ದಕ್ಷಿಣ ಮಂಡಲದ ಅಧ್ಯಕ್ಷ ಡಿ.ವೇದವ್ಯಾಸ ಕಾಮತ್ ಅವರು ಆಗ್ರಹಿಸಿದರು

No comments