Breaking News

Breaking news ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ಪ್ರಕರಣ ಮೂವರ ಬಂಧನ


ಮಂಗಳೂರು: ರಾಜ್ಯದಲ್ಲೇ ಭಾರೀ ಸಂಚಲನ ಸೃಷ್ಟಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಆರ್‍ಎಸ್‍ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಶಫೀ, ಷರೀಫ್, ಖಲಂದರ್ ಎಂಬುವುದಾಗಿ ಗುರುತಿಸಲಾಗಿದೆ.
 ಪೊಲೀಸರು ಸುಮಾರು 7 ತನಿಖಾ ತಂಡಗಳನ್ನು ರಚಿಸಿ ಬೇರೆ ಬೇರೆ ಕಡೆಗಳಲ್ಲಿ ಆರೋಪಿಗಳ ಪತ್ತೆಗೆ ಬಲೆಬೀಸಿದ್ದರು. ಅಲ್ಲದೇ ಪೊಲೀಸರಿಗೆ ಆರೋಪಿಗಳನ್ನು ಪತ್ತೆಹಚ್ಚುವುದು ಸವಾಲಾಗಿತ್ತು. ಘಟನೆ ಬಳಿಕ ಮಂಗಳೂರು, ಬಂಟ್ವಾಳ, ಬಿಸಿರೋಡಿನಲ್ಲಿ ಹಲವು ದಿನ 144 ಸೆಕ್ಷನ್ ಜಾರಿಯಾಗಿತ್ತು. ಸದ್ಯ ಇದೀಗ ಮೂವರು ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

No comments