Breaking News

ಭಾರತದಲ್ಲಿ ಮುಸ್ಲಿಮರಿಗೆ ಭಯ ಮತ್ತು ಅಭದ್ರತೆಯ ವಾತಾವರಣವಿದೆ : ಹಮೀದ್ ಅನ್ಸಾರಿ



ಬೆಂಗಳೂರು :ದೇಶದಲ್ಲಿ ಮುಸ್ಲಿಮರು ಭಯ ಮತ್ತು ಅಭದ್ರತೆಯಿಂದ ಬಳಲುತ್ತಿದ್ದಾರೆ ಎಂದು ಅನ್ಸಾರಿ ಕಳವಳ ವ್ಯಕ್ತಪಡಿಸಿದ್ದಾರೆ.ಉಪರಾಷ್ಟ್ರಪತಿಯಾಗಿ ಹಮೀದ್ ಅನ್ಸಾರಿಯವರ ಕೊನೆಯ ದಿನವಾದ ಇಂದು ರಾಜ್ಯಸಭಾ ಟಿವಿಯಲ್ಲಿ ಅವರ ಸಂದರ್ಶನ ಪ್ರಸಾರವಾಗಿದೆ. ಅದರಲ್ಲಿ ತಮ್ಮ ಕಳವಳವನ್ನು ಹಂಚಿಕೊಂಡಿರುವ ಅನ್ಸಾರಿ, ಒಬ್ಬ ವ್ಯಕ್ತಿಯ ಭಾರತೀಯ ನಿಷ್ಠೆಯನ್ನು ಪ್ರಶ್ನಿಸುವ ಮಟ್ಟಕ್ಕೆ ಹೋಗುತ್ತಿರುವುದು ನಿಜಕ್ಕೂ ಆತಂಕಕಾರಿ ವಿಷಯವಾಗಿದೆ ಎಂದು ವಿಷಾದಿಸಿದ್ದಾರೆ.
"ಭಾರತೀಯ ಮೌಲ್ಯಗಳು ಕುಸಿಯುತ್ತಿವೆ. ವಿವಿಧ ಸ್ಥಳಗಳಲ್ಲಿ ವಿವಿಧ ಸ್ತರಗಳಲ್ಲಿ ಕಾನೂನು ಪರಿಪಾಲನೆ ಮಾಡುವ ಅಧಿಕಾರಿಗಳ ಸಾಮರ್ಥ್ಯವೂ ಕುಸಿಯುತ್ತಿದೆ," ಎಂದು ಹಮೀದ್ ಅನ್ಸಾರಿ ಅಭಿಪ್ರಾಯಪಟ್ಟಿದ್ದಾರೆ.
"ದೇಶದ ಮುಸ್ಲಿಮರಲ್ಲಿ ಭಯ ಮತ್ತು ಅಭದ್ರತೆಯ ಭಾವನೆ ಇಣುಕುತ್ತಿದೆ. ದೇಶದೆಲ್ಲೆಡೆ ನನಗೆ ಕೇಳಿಬಂದ ಸಂಗತಿ. ಉತ್ತರ ಭಾರತದಿಂದ ಹೆಚ್ಚಾಗಿ ಕೇಳಿದ್ದೇನೆ," ಎಂದು ಅನ್ಸಾರಿ ಹೇಳಿದ್ದಾರೆ.
ಇಂಥ ಸ್ಥಿತಿಯಲ್ಲಿ ಮುಸ್ಲಿಮರಿಗೆ ಒಂದಷ್ಟು ಟಿಪ್ಸ್ ಕೊಟ್ಟಿರುವ ನಿರ್ಗಮಿತ ಉಪರಾಷ್ಟ್ರಪತಿಗಳು, ಅಭಿವೃದ್ಧಿ, ಶಿಕ್ಷಣ, ಸ್ಪರ್ಧಾತ್ಮಕತೆಯನ್ನು ಅಳವಡಿಸಿಕೊಳ್ಳುವಂತೆ ತಮ್ಮ ಧರ್ಮಬಾಂಧವರಿಗೆ ಕಿವಿಮಾತು ಹೇಳಿದ್ದಾರೆ. ಅಲ್ಲದೇ, ತ್ರಿವಳಿ ತಲಾಖ್'ನಂತಹ ಆಚರಣೆಯಿಂದ ಮುಕ್ತರಾಗುವಂತೆಯೂ ಕರೆ ನೀಡಿದ್ದಾರೆ.

 

loading...

No comments